ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.
2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ವರ್ಗಾವಣೆ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಡಳಿತ ಮಂಡಳಿಗಳು ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನಾಂಕವಾಗಿದೆ.
ಆಡಳಿತ ಮಂಡಳಿಗಳು ಸಲ್ಲಿಸಿದ ಪ್ರಸ್ತಾವನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರಿಶೀಲಿಸಿ ಉಪನಿರ್ದೇಶಕರಿಗೆ ಮೇ 9ರ ವರೆಗೆ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ. ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆ ಖಚಿತಪಡಿಸಿಕೊಂಡು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಡಿಡಿಪಿಐ ಪ್ರಸ್ತಾವನೆ ಪರಿಶೀಲಿಸಿ ದಾಖಲೆ ಸೂಕ್ತ ಶಿಫಾರಸಿನೊಂದಿಗೆ ನಿರ್ದೇಶಕರಿಗೆ ಮೇ 20 ರೊಳಗೆ ಸಲ್ಲಿಸಬೇಕು. ಅಂತರ ವಿಭಾಗ ವರ್ಗಾವಣೆ ಕೋರಿ ಬಂದ ಪ್ರಸ್ತಾವನೆಗಳನ್ನು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಏಪ್ರಿಲ್ 20ರಿಂದ ಮೇ 5 ರವರೆಗೆ ಸಲ್ಲಿಸಲು ಸಮಯ ನೀಡಲಾಗಿದೆ
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…