ರಾಮನಗರ : ʼಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆʼ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼ ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತುʼʼ ಎಂದು ವಿವರಿಸಿದ್ದಾರೆ.
ʼʼಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಯಿತು. ರಾಮನಗರ ಜಿಲ್ಲಾ ಕೇಂದ್ರವಾಯಿತು. ನಂತರ ಈ ಜಿಲ್ಲೆಗೆ ಹಾರೋಹಳ್ಳಿ ಹೊಸ ತಾಲೂಕು ಸೇರ್ಪಡೆಯಾಯಿತು. ಈಗ ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನನ್ನ ಚಿಂತನೆಯೂ ಕೂಡʼʼ ಎಂದು ಅವರು ತಿಳಿಸಿದ್ದಾರೆ.
ʼಹೀಗಾಗಿ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಇರಿಸಲು ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜನರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲಾಗುತ್ತಿದೆʼ ಎಂದು ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…