ರಾಜ್ಯ

ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ನಟ ಶ್ರೀಧರ್‌ ನಾಯಕ್‌(47) ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್‌ ನಾಯಕ್‌ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಧರ್‌ ನಾಯಕ್‌ ನಿಧನರಾಗಿದ್ದಾರೆ.

ಗುರುತೇ ಸಿಗದಷ್ಟು ಬದಲಾಗಿರುವ ಅವರು, ಬೆಡ್‌ ಮೇಲೆ ಮಲಗಿದ್ದನ್ನು ನೋಡಿ ಹಲವರಿಗೆ ಶಾಕ್‌ ಆಗಿತ್ತು. ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಅವರು, ಮ್ಯಾಕ್ಸ್‌ ಚಿತ್ರದಲ್ಲೂ ನಟಿಸಿದ್ದರು.

ಶ್ರೀಧರ್‌ ನಾಯಕ್‌ ನಿಧನದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಹಲವು ನಟ-ನಟಿಯರು ಶ್ರೀಧರ್‌ ನಿಧನಕ್ಕೆ ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

1 hour ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

1 hour ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

2 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

2 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

12 hours ago