ರಾಜ್ಯ

ಡಿ ಗ್ಯಾಂಗ್‌ಗೆ ಜಾಮೀನು; ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್‌ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ.

ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿರಬಹುದು ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದ್ದು ಇರುತ್ತೋ ಅವರಿಗೆ ಅಂತಿಮವಾಗಿ ಶಿಕ್ಷೆ ಆಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡುತ್ತಾ, ಕಾನೂನಿನ ಅಡಿಯಲ್ಲಿ ಈಗ ಏನು ಆಗಿದೆಯೋ ಅದಕ್ಕೆ ನಾವು ತಲೆಬಾಗುತ್ತೇವೆ. ಆದರೆ ನನ್ನ ಮಗನ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಬೇಕೆ ಹೊರತು ಬೇರೇನೂ ಬೇಡ ಎಂದರು.

ಹಾಗೆಯೇ ಸರ್ಕಾರ ಕಡೆಯಿಂದ ತಮ್ಮ ಸೊಸೆಗೆ ಖಾಯಂ ನೌಕರಿ ಕೊಡಬೇಕೆಂದು ಮನವಿ ಮಾಡಿದರು.

ದರ್ಶನ್‌ಗೆ ಜಾಮೀನು ಸಿಕ್ಕಿದೆ. ಒಂದು ವೇಳೆ ಅವರು ನಿಮ್ಮ ಜೊತೆ ಮಾತುಕತೆಗೆ ಬಂದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಾಶಿನಾಥ್‌ ಅವರು, ಅದರ ಬಗ್ಗೆ ಯೋಚನೆ ಮಾಡಿಲ್ಲ. ಅವರ ಜೊತೆ ಮಾತಾಡುವ ಅಪೇಕ್ಷೇಯೂ ಇಲ್ಲ ಎಂದು ಹೇಳಿದರು.

ಜಾಮೀನು ಸಿಕ್ಕಿರುವುದಕ್ಕೆ ಸಿಎಂ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಹಿತೈಷಿಗಳು, ಹಿರಿಯರ ಜೊತೆ ಚರ್ಚಿಸಿ ನಂತರ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.

andolana

Recent Posts

ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ರಾಜ್ಯಪಾಲರಾದ ಥಾವರ್‌…

12 mins ago

ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್‌ ಎಫ್‌ಐಆರ್‌ ದಾಖಲು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಮಹಮ್ಮದ್‌ ಪೈಗಂಬರ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿರುವ…

12 mins ago

ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣಕ್ಕೆ ಅವಕಾಶ ವಿಚಾರ: ಬಂಡೀಪುರ ಎಸಿಎಫ್‌ ನವೀನ್‌ ಕುಮಾರ್‌ ಪ್ರತಿಕ್ರಿಯೆ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ…

39 mins ago

ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ…

44 mins ago

ಮಡಿಕೇರಿ| ಬೆಲೆ ಏರಿಕೆಯೇ ಕಾಂಗ್ರೆಸ್ ಸರ್ಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್‌ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…

58 mins ago

ಮೈಸೂರು| ಎಲ್ಲಾ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ…

1 hour ago