ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಇದಕ್ಕೆ ರೇಣುಕಸ್ವಾಮಿ ತಂದೆ ಕಾಶಿನಾಥ್ ತಂಬಾ ನಿರಾಸೆ ವ್ಯಕ್ತಪಡಿಸಿದ್ದಾರೆ.
ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಗನ ಸಾವಿನ ವಿಚಾರಕ್ಕೆ ಭಾವುಕರಾದರು. ನ್ಯಾಯಾಲಯದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ತಾತ್ಕಾಲಿಕವಾಗಿ ಆರೋಪಿಗಳಿಗೆ ಜಾಮೀನು ಸಿಕ್ಕಿರಬಹುದು ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದ್ದು ಇರುತ್ತೋ ಅವರಿಗೆ ಅಂತಿಮವಾಗಿ ಶಿಕ್ಷೆ ಆಗುತ್ತದೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.
ಮುಂದುವರಿದು ಮಾತನಾಡುತ್ತಾ, ಕಾನೂನಿನ ಅಡಿಯಲ್ಲಿ ಈಗ ಏನು ಆಗಿದೆಯೋ ಅದಕ್ಕೆ ನಾವು ತಲೆಬಾಗುತ್ತೇವೆ. ಆದರೆ ನನ್ನ ಮಗನ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಬೇಕೆ ಹೊರತು ಬೇರೇನೂ ಬೇಡ ಎಂದರು.
ಹಾಗೆಯೇ ಸರ್ಕಾರ ಕಡೆಯಿಂದ ತಮ್ಮ ಸೊಸೆಗೆ ಖಾಯಂ ನೌಕರಿ ಕೊಡಬೇಕೆಂದು ಮನವಿ ಮಾಡಿದರು.
ದರ್ಶನ್ಗೆ ಜಾಮೀನು ಸಿಕ್ಕಿದೆ. ಒಂದು ವೇಳೆ ಅವರು ನಿಮ್ಮ ಜೊತೆ ಮಾತುಕತೆಗೆ ಬಂದರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಕಾಶಿನಾಥ್ ಅವರು, ಅದರ ಬಗ್ಗೆ ಯೋಚನೆ ಮಾಡಿಲ್ಲ. ಅವರ ಜೊತೆ ಮಾತಾಡುವ ಅಪೇಕ್ಷೇಯೂ ಇಲ್ಲ ಎಂದು ಹೇಳಿದರು.
ಜಾಮೀನು ಸಿಕ್ಕಿರುವುದಕ್ಕೆ ಸಿಎಂ ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಮ್ಮ ಹಿತೈಷಿಗಳು, ಹಿರಿಯರ ಜೊತೆ ಚರ್ಚಿಸಿ ನಂತರ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…