ರಾಜ್ಯ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು: ರೇಣುಕಾಸ್ವಾಮಿ ತಂದೆಯ ಪ್ರತಿಕ್ರಿಯೆ

ಬೆಂಗಳೂರು: ದರ್ಶನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ತಿಳಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್‌ಗೆ 45 ದಿನಗಳ ಕಾಲ ಹೈಕೋರ್ಟ್‌ ಮಧ್ಯಂತರ ಷರತ್ತು ಬದ್ಧ ಜಾಮೀನು ನೀಡಿದೆ. ಈ ವಿಚಾರವಾಗಿ ಮೃತ ರೇಣುಕಾಸ್ವಾಮಿ ತಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ನಮಗೆ ಮತ್ತು ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ. ತಪ್ಪು ಮಾಡಿದವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುವವರೆಗೂ ನಾವು ಕಾನೂನು ಹೋರಾಟ ಮಾಡುತ್ತೇವೆ. ದರ್ಶನ್‌ಗೆ ಅನಾರೋಗ್ಯದ ಸಮಸ್ಯೆಯಿಂದ ಮಧ್ಯಂತರ ಜಾಮೀನು ದೊರೆತಿರುವುದರಿಮದ ನಮಗೆ ಆ ಬಗ್ಗೆ ಯಾವ ಅಭ್ಯಂತರವಿಲ್ಲ. ಆ ತೀರ್ಪನ್ನು ನ್ಯಾಯಾಲಯ ಘೋಷಿಸಿದೆ. ಹೀಗಾಗಿ ನಾವೆಲ್ಲರೂ ಕಾನೂನಿನ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

50 seconds ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

7 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

7 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

7 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

7 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

7 hours ago