ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ನಾಳೆ(ಅ.10) ಹಾಗೂ ಎ1 ಆರೋಪಿ ಪವಿತ್ರಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಲಾಗಿದೆ.
ಆರೋಪಿ ದರ್ಶನ್, ಪವಿತ್ರಾ, ರವಿಶಂಕರ್, ದೀಪಕ್, ಲಕ್ಷ್ಮಣ್ ಹಾಗೂ ನಾಗರಾಜ್ ಸೇರಿದಂತೆ ಇನ್ನಿತರ ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು 57ನೇ ಸಿಸಿಎಚ್ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆಯಲ್ಲಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಕ್ಕೆ, ಇಂದು (ಅ.9) ಎಸ್ಪಿಪಿ ಪ್ರಸನ್ನಕುಮಾರ್ ಸುದೀರ್ಘವಾಗಿ ಪ್ರತಿವಾದ ಮಂಡಿಸಿದ್ದಾರೆ.
ಎಸ್ಪಿಪಿ ಅವರ ಪ್ರತಿವಾದದಲ್ಲಿ ಅಂತಿಮವಾಗಿ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು, ಎ12 ಲಕ್ಷ್ಮಣ್ ಅವರಿಗೆ ಜಾಮೀನು ನೀಡಬಾರದು. ಎ13 ಆರೋಪಿಯಾಗಿರುವ ದೀಪಕ್ ಮೇಲೆ ಕೊಲೆ ಕೇಸ್, ಯಾವುದೇ ಅಪಹರಣ ಹಾಗೂ ಆರೋಪ ಇಲ್ಲದ ಕಾರಣ ಅವರಿಗೆ ಜಾಮೀನು ನೀಡಬಹುದು ಎಂದು ಪ್ರತಿವಾದ ಮಂಡಿಸಿದ್ದಾರೆ.
ಈ ಪ್ರತಿವಾದದ ನಂತರ ಸಿ.ವಿ.ನಾಗೇಶ್ ಅವರ ಪ್ರತಿಕ್ರಿಯೆಗೆ ನ್ಯಾಯಾಧೀಶರು ಕಾಲಾವಕಾಶ ನೀಡಿರುವ ಕಾರಣ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…