ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ನಾಳೆ(ಅ.10) ಹಾಗೂ ಎ1 ಆರೋಪಿ ಪವಿತ್ರಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಲಾಗಿದೆ.
ಆರೋಪಿ ದರ್ಶನ್, ಪವಿತ್ರಾ, ರವಿಶಂಕರ್, ದೀಪಕ್, ಲಕ್ಷ್ಮಣ್ ಹಾಗೂ ನಾಗರಾಜ್ ಸೇರಿದಂತೆ ಇನ್ನಿತರ ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು 57ನೇ ಸಿಸಿಎಚ್ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆಯಲ್ಲಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಕ್ಕೆ, ಇಂದು (ಅ.9) ಎಸ್ಪಿಪಿ ಪ್ರಸನ್ನಕುಮಾರ್ ಸುದೀರ್ಘವಾಗಿ ಪ್ರತಿವಾದ ಮಂಡಿಸಿದ್ದಾರೆ.
ಎಸ್ಪಿಪಿ ಅವರ ಪ್ರತಿವಾದದಲ್ಲಿ ಅಂತಿಮವಾಗಿ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು, ಎ12 ಲಕ್ಷ್ಮಣ್ ಅವರಿಗೆ ಜಾಮೀನು ನೀಡಬಾರದು. ಎ13 ಆರೋಪಿಯಾಗಿರುವ ದೀಪಕ್ ಮೇಲೆ ಕೊಲೆ ಕೇಸ್, ಯಾವುದೇ ಅಪಹರಣ ಹಾಗೂ ಆರೋಪ ಇಲ್ಲದ ಕಾರಣ ಅವರಿಗೆ ಜಾಮೀನು ನೀಡಬಹುದು ಎಂದು ಪ್ರತಿವಾದ ಮಂಡಿಸಿದ್ದಾರೆ.
ಈ ಪ್ರತಿವಾದದ ನಂತರ ಸಿ.ವಿ.ನಾಗೇಶ್ ಅವರ ಪ್ರತಿಕ್ರಿಯೆಗೆ ನ್ಯಾಯಾಧೀಶರು ಕಾಲಾವಕಾಶ ನೀಡಿರುವ ಕಾರಣ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…