ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿಯನ್ನು ನಾಳೆ(ಅ.10) ಹಾಗೂ ಎ1 ಆರೋಪಿ ಪವಿತ್ರಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಲಾಗಿದೆ.
ಆರೋಪಿ ದರ್ಶನ್, ಪವಿತ್ರಾ, ರವಿಶಂಕರ್, ದೀಪಕ್, ಲಕ್ಷ್ಮಣ್ ಹಾಗೂ ನಾಗರಾಜ್ ಸೇರಿದಂತೆ ಇನ್ನಿತರ ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು 57ನೇ ಸಿಸಿಎಚ್ ನ್ಯಾಯಾಲಯ ವಿಚಾರಣೆ ನಡೆಸಿದೆ. ವಿಚಾರಣೆಯಲ್ಲಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಕ್ಕೆ, ಇಂದು (ಅ.9) ಎಸ್ಪಿಪಿ ಪ್ರಸನ್ನಕುಮಾರ್ ಸುದೀರ್ಘವಾಗಿ ಪ್ರತಿವಾದ ಮಂಡಿಸಿದ್ದಾರೆ.
ಎಸ್ಪಿಪಿ ಅವರ ಪ್ರತಿವಾದದಲ್ಲಿ ಅಂತಿಮವಾಗಿ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್, ಎ8 ರವಿಶಂಕರ್, ಎ11 ನಾಗರಾಜು, ಎ12 ಲಕ್ಷ್ಮಣ್ ಅವರಿಗೆ ಜಾಮೀನು ನೀಡಬಾರದು. ಎ13 ಆರೋಪಿಯಾಗಿರುವ ದೀಪಕ್ ಮೇಲೆ ಕೊಲೆ ಕೇಸ್, ಯಾವುದೇ ಅಪಹರಣ ಹಾಗೂ ಆರೋಪ ಇಲ್ಲದ ಕಾರಣ ಅವರಿಗೆ ಜಾಮೀನು ನೀಡಬಹುದು ಎಂದು ಪ್ರತಿವಾದ ಮಂಡಿಸಿದ್ದಾರೆ.
ಈ ಪ್ರತಿವಾದದ ನಂತರ ಸಿ.ವಿ.ನಾಗೇಶ್ ಅವರ ಪ್ರತಿಕ್ರಿಯೆಗೆ ನ್ಯಾಯಾಧೀಶರು ಕಾಲಾವಕಾಶ ನೀಡಿರುವ ಕಾರಣ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…