ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್‌ : ದರ್ಶನ್‌ಗೆ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನಟ ದರ್ಶನ್‌ ಜಾಮೀನು ಕುರಿತು ಹೈಕೋರ್ಟ್‌ನಲ್ಲಿ ವಕೀಲ ಸಿ.ವಿ.ನಾಗೇಶ್‌ ಹಾಗೂ ಸರ್ಕಾರದ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ಸುದೀರ್ಘವಾಗಿ ವಾದ-ಪ್ರತಿವಾದಗಳನ್ನು ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಮಂಡಿಸಿದ್ದರು. ಈ ವಾದ-ಪ್ರತಿವಾದಗಳನ್ನು ಆಲಿಸದ ಹೈಕೋರ್ಟ್‌ ತೀರ್ಪುನ್ನು ಕಾಯ್ದಿರಿಸಿತ್ತು. ಆದರೆ ಇಂದು ದರ್ಶನ್‌ಗೆ ರೆಗ್ಯುಲರ್‌ ಜಾಮೀನು ನೀಡಿದೆ.

ನಟ ದರ್ಶನ್‌ಗೆ ಈಗಾಗಲೇ ಅನಾರೋಗ್ಯದ ಕಾರಣ ಷರತ್ತು ಬದ್ಧ ಮಧ್ಯಂತರ ಜಾಮೀನು ಪ್ರಕಟಿಸಿದ್ದ ಹೈಕೋರ್ಟ್‌, ಇದೀಗ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾಗಿದ್ದ ಎ2 ಆರೋಪಿ ನಟ ದರ್ಶನ್‌, ಎ1 ಪವಿತ್ರಾ ಗೌಡ, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್‌, ಎ12 ಲಕ್ಷ್ಮಣ್‌ ಹಾಗೂ ಎ14 ಪ್ರದೋಷ್‌ ಅವರಿಗೆ ಇಂದು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇದೇ ಡಿಸೆಂಬರ್‌ 9 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ರೆಗ್ಯುಲರ್‌ ಜಾಮೀನು ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಇಂದು ಮಧ್ಯಾಹ್ನ ಸುಮಾರು 2.30 ಗಂಟೆಯ ವೇಳೆಗೆ ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಕೋರ್ಟ್‌ ವಿಧಿಸಿರುವ ಷರತ್ತುಗಳೇನು?

1.ನಟ ದರ್ಶನ್‌ ಹೈಕೋರ್ಟ್‌ ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
2. ಎಲ್ಲಾ ಆರೋಪಿಗಳು 1 ಲಕ್ಷ ಬಾಂಡ್‌ ನೀಡಿ, ಇಬ್ಬರು ಶ್ಯೂರಿಟಿ ದಾರರ ಸಹಿಯನ್ನು ಹಾಕಿಸಬೇಕು.
3. ಪ್ರತಿ ವಿಚಾರಣೆಗೂ ಕಡ್ಡಾಯವಾಗಿ ಹಾಜರಾಗಬೇಕು.
4.ಸಾಕ್ಷಿದಾರರಿಗೆ ಬೆದರಿಕೆ ಹಾಕುವಂತಿಲ್ಲ.
5.ಇದೇ ರೀತಿಯ ಕೇಸ್‌ನಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿದೆ.

ಜಾಮೀನು ದೊರೆಯದ ಇತರೆ ಆರೋಪಿಗಳು ಯಾರು?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಕೆ.ಪವನ್‌, ಎ4 ರಾಘವೇಂದ್ರ, ಎ8 ರವಿಶಂಕರ್‌, ಎ9 ಧನರಾಜ್‌, ಎ10 ವಿನಯ್‌ ಹಾಗೂ ಎ13 ದೀಪಕ್‌ ಎಂಬ ಆರೋಪಿಗಳಿಗೆ ಇನ್ನು ಹೈಕೋರ್ಟ್‌ನಿಂದ ಜಾಮೀನು ದೊರೆತಿಲ್ಲ.

ದರ್ಶನ್‌ ಗ್ಯಾಂಗ್‌ ಜಾಮೀನು ಸಿಕ್ಕಿರುವುದಕ್ಕೆ ಪೊಲೀಸರ ನಿಲುವೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ. ಹೀಗಾಗಿ ದರ್ಶನ್‌ ಗ್ಯಾಂಗ್‌ಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರಿಂಕೋರ್ಟ್‌ಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಆರು ವಾರಗಳ ಕಾಲದ ಮಧ್ಯಂತರ ಜಾಮೀನನನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸುವ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ ಇದೀಗ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ರೆಗ್ಯುಲರ್‌ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.

ಅರ್ಚನ ಎಸ್‌ ಎಸ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

7 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

7 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

8 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

8 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

8 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

8 hours ago