ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್‌ : ದರ್ಶನ್‌ಗೆ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಇಂದು(ಡಿ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನಟ ದರ್ಶನ್‌ ಜಾಮೀನು ಕುರಿತು ಹೈಕೋರ್ಟ್‌ನಲ್ಲಿ ವಕೀಲ ಸಿ.ವಿ.ನಾಗೇಶ್‌ ಹಾಗೂ ಸರ್ಕಾರದ ಪರ ವಕೀಲ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ಸುದೀರ್ಘವಾಗಿ ವಾದ-ಪ್ರತಿವಾದಗಳನ್ನು ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಮಂಡಿಸಿದ್ದರು. ಈ ವಾದ-ಪ್ರತಿವಾದಗಳನ್ನು ಆಲಿಸದ ಹೈಕೋರ್ಟ್‌ ತೀರ್ಪುನ್ನು ಕಾಯ್ದಿರಿಸಿತ್ತು. ಆದರೆ ಇಂದು ದರ್ಶನ್‌ಗೆ ರೆಗ್ಯುಲರ್‌ ಜಾಮೀನು ನೀಡಿದೆ.

ನಟ ದರ್ಶನ್‌ಗೆ ಈಗಾಗಲೇ ಅನಾರೋಗ್ಯದ ಕಾರಣ ಷರತ್ತು ಬದ್ಧ ಮಧ್ಯಂತರ ಜಾಮೀನು ಪ್ರಕಟಿಸಿದ್ದ ಹೈಕೋರ್ಟ್‌, ಇದೀಗ ಷರತ್ತು ಬದ್ಧ ರೆಗ್ಯುಲರ್‌ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾಗಿದ್ದ ಎ2 ಆರೋಪಿ ನಟ ದರ್ಶನ್‌, ಎ1 ಪವಿತ್ರಾ ಗೌಡ, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್‌, ಎ12 ಲಕ್ಷ್ಮಣ್‌ ಹಾಗೂ ಎ14 ಪ್ರದೋಷ್‌ ಅವರಿಗೆ ಇಂದು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಇದೇ ಡಿಸೆಂಬರ್‌ 9 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ರೆಗ್ಯುಲರ್‌ ಜಾಮೀನು ಅರ್ಜಿಗಳನ್ನು ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಇಂದು ಮಧ್ಯಾಹ್ನ ಸುಮಾರು 2.30 ಗಂಟೆಯ ವೇಳೆಗೆ ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಲಾಗಿದೆ ಎಂದು ತೀರ್ಪು ಪ್ರಕಟಿಸಿದೆ.

ಕೋರ್ಟ್‌ ವಿಧಿಸಿರುವ ಷರತ್ತುಗಳೇನು?

1.ನಟ ದರ್ಶನ್‌ ಹೈಕೋರ್ಟ್‌ ಅನುಮತಿ ಇಲ್ಲದೆ ಬೆಂಗಳೂರು ಬಿಟ್ಟು ಹೋಗುವಂತಿಲ್ಲ.
2. ಎಲ್ಲಾ ಆರೋಪಿಗಳು 1 ಲಕ್ಷ ಬಾಂಡ್‌ ನೀಡಿ, ಇಬ್ಬರು ಶ್ಯೂರಿಟಿ ದಾರರ ಸಹಿಯನ್ನು ಹಾಕಿಸಬೇಕು.
3. ಪ್ರತಿ ವಿಚಾರಣೆಗೂ ಕಡ್ಡಾಯವಾಗಿ ಹಾಜರಾಗಬೇಕು.
4.ಸಾಕ್ಷಿದಾರರಿಗೆ ಬೆದರಿಕೆ ಹಾಕುವಂತಿಲ್ಲ.
5.ಇದೇ ರೀತಿಯ ಕೇಸ್‌ನಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತುಗಳನ್ನು ವಿಧಿಸಿದೆ.

ಜಾಮೀನು ದೊರೆಯದ ಇತರೆ ಆರೋಪಿಗಳು ಯಾರು?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎ3 ಆರೋಪಿ ಕೆ.ಪವನ್‌, ಎ4 ರಾಘವೇಂದ್ರ, ಎ8 ರವಿಶಂಕರ್‌, ಎ9 ಧನರಾಜ್‌, ಎ10 ವಿನಯ್‌ ಹಾಗೂ ಎ13 ದೀಪಕ್‌ ಎಂಬ ಆರೋಪಿಗಳಿಗೆ ಇನ್ನು ಹೈಕೋರ್ಟ್‌ನಿಂದ ಜಾಮೀನು ದೊರೆತಿಲ್ಲ.

ದರ್ಶನ್‌ ಗ್ಯಾಂಗ್‌ ಜಾಮೀನು ಸಿಕ್ಕಿರುವುದಕ್ಕೆ ಪೊಲೀಸರ ನಿಲುವೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ಇಂದು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ. ಹೀಗಾಗಿ ದರ್ಶನ್‌ ಗ್ಯಾಂಗ್‌ಗೆ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಪೊಲೀಸರು ಸುಪ್ರಿಂಕೋರ್ಟ್‌ಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಆರು ವಾರಗಳ ಕಾಲದ ಮಧ್ಯಂತರ ಜಾಮೀನನನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸುವ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ ಇದೀಗ ಹೈಕೋರ್ಟ್‌ನ ಏಕ ಸದಸ್ಯ ಪೀಠವೂ ರೆಗ್ಯುಲರ್‌ ಜಾಮೀನು ನೀಡಿದೆ ಎಂದು ಆದೇಶ ಹೊರಡಿಸಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago