ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವ ಫೋಟೋವೊಂದು ವೈರಲ್ ಆಗಿತ್ತು. ಇದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿದ್ದವು.
ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ 9 ಮಂದಿ ಜೈಲು ಸಿಬ್ಬಂದಿಯನ್ನು ಅಮಾನತುಗೊಳಿಸಿತ್ತು.
ಇದಲ್ಲದೇ ನಟ ದರ್ಶನ್ರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ಕೂಡ ನಡೆಸಿತ್ತು. ಇದೀಗ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಉಳಿದ ಆರೋಪಿಗಳನ್ನು ಸಹ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ಸೂಚಿಸಿದೆ. ಪವನ್, ರಾಘವೇಂದ್ರ, ನಂದೀಶ್ ಈ ಮೂವರು ಮೈಸೂರು ಜೈಲಿಗೆ ಶಿಫ್ಟ್ ಆಗಲಿದ್ದು, ಜಗದೀಶ್ ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ಧನರಾಜ್ ಧಾರವಾಡ ಜೈಲಿಗೆ ಹೋಗಲಿದ್ದು, ವಿನಯ್ ವಿಜಯಪುರ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ನಾಗರಾಜ್ ಗುಲ್ಬರ್ಗಾ ಜೈಲಿಗೆ ಶಿಫ್ಟ್ ಆಗಲಿದ್ದು, ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ ಶಿಫ್ಟ್ ಆಗಲಿದ್ದಾನೆ. ಪ್ರದೋಷ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದು, ಉಳಿದ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಗ್ಯಾಂಗ್ನ ಆರೋಪಿಗಳೆಲ್ಲಾ ಒಬ್ಬೊಬ್ಬರು ಒಂದೊಂದು ಕಡೆ ದಿಕ್ಕಾಪಾಲಾಗಿದ್ದಾರೆ.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…