ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ.
ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. ಆದರೆ ನಟ ದರ್ಶನ್ ಜೈಲಿನೊಳಗೆ ಓಡಾಡಬಹುದು ಎಂದು ಕೋರ್ಟ್ ಹೇಳಿದೆ.
ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಕೋರಿ ನಟ ದರ್ಶನ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನಿರಾಕರಣೆ ಮಾಡಿದೆ.
ಜೈಲು ಕೈಪಿಡಿಯಂತೆ ಜೈಲಿನೊಳಗೆ ವಾಕ್ ಮಾಡಬಹದು ಎಂದು ಹೇಳಿದ್ದು, ನಟ ದರ್ಶನ್ಗೆ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡಲು ಅನುಮತಿ ನೀಡಿದೆ.
ಈ ಮೂಲಕ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದ್ದು, ದರ್ಶನ್ ಮಾನಸಿಕವಾಗಿ ತೀವ್ರ ಕುಗ್ಗಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…