ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪಾರದರ್ಶಕ ವಿಚಾರಣೆಗೆ ನಟ ಉಪೇಂದ್ರ ಒತ್ತಾಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಗ್ಗೆ ತನಿಖೆ ನಡೆಯುತ್ತಿದೆ. ನಟ ದರ್ಶನ್‌ ಹಾಗೂ ಪವಿತ್ರಗೌಡ ಸೇರಿದಂತೆ ಈವರೆಗೂ 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಿರುವಾಗ ಅನೇಕ ಚಿತ್ರರಂಗದ ನಟ-ನಟಿಯರು ಈ ಬಗ್ಗೆ ಮಾತನಾಡಿಲ್ಲ. ಆದರೆ ನಿನ್ನೆ ತಾನೆ ನಟ ಸುದೀಪ್‌ ಈ ಬಗ್ಗೆ ಮಾತನಾಡಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದರು. ಇವಾಗ ನಟ ಉಪೇಂದ್ರ ಅವರು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವುದರ ಮೂಲಕ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಉಪೇಂದ್ರ ಪೋಸ್ಟ್‌ ಹೀಗಿದೆ…

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ….. ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) (ಕಾನೂನು ಸುಧಾರಣೆಗಳು #Criminal JusticeReforms) ಎಂದು ಹೇಳಿದ್ದಾರೆ.

ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷ್ಯ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ.

ಈ ರೀತಿ ಮಾಡಿದಾಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

25ನೇ ಸಿಎಂ ಆಗಿ ಇಂದು ಡಿಕೆಶಿ ಪ್ರಮಾಣ ವಚನ ; ಸಂಭ್ರಮದ ಸಿದ್ಧತೆ

ಬೆಂಗಳೂರು : ರಾಜ್ಯ ರಾಜಕಾರಣದ ಅತ್ಯಂತ ಮಹತ್ವದ ಘಟ್ಟಕ್ಕೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗುತ್ತಿದ್ದು, ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್…

22 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ನೀರಿಲ್ಲದ ನೀರಿನ ಟ್ಯಾಂಕಿನಲ್ಲಿ ಕಲಿಯುವ ಮಕ್ಕಳ ಕಲರವ!

90ರ ದಶಕದಲ್ಲಿ ಪೊತುಕುಚಿ ಶ್ರೀನಿವಾಸ್ ಹೈದರಾಬಾದಿನ ಮಿಯಾಪುರದಲ್ಲಿದ್ದ ಒಂದು ಜರ್ಮನ್ ಕಂಪೆನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಅವರ ಕಂಪೆನಿಯ ಪಕ್ಕದಲ್ಲಿ ಒಂದು…

25 mins ago

ಬೃಹತ್‌ ಎಂಸಿಸಿ ರಚನೆ ನನೆಗುದಿಗೆ

ಕೆ.ಬಿ.ರಮೇಶನಾಯಕ ಮೈಸೂರು : ಮೈಸೂರು ಮಹಾನಗರಪಾಲಿಕೆ ಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿ ೫ ತಿಂಗಳು ಕಳೆದರೂ ರಾಜ್ಯ…

28 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 03 ಬುಧವಾರ

1 hour ago

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈಶ್ವರ್‌ ಖಂಡ್ರೆ

ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್‌ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

16 hours ago

ಕೊಡಗಿನ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ: ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟನೆ

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…

16 hours ago