ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ರನ್ನು ಇಂದು ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡುತ್ತಿದ್ದ ಫೋಟೋವೊಂದು ವೈರಲ್ ಆಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ನಟ ದರ್ಶನ್ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿತ್ತು. ಇನ್ನುಳಿದ ಆರೋಪಿಗಳನ್ನು ಬೇರೆ ಬೇರೆ ಜಿಲ್ಲೆಗೆ ಶಿಫ್ಟ್ ಮಾಡಲಾಗಿತ್ತು.
ಇದೀಗ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರು ಫುಲ್ ಸೈಲೆಂಟ್ ಆಗಿದ್ದಾರೆ ಎನ್ನಲಾಗಿದ್ದು, ವಿಶೇಷ ಸೆಲ್ನಲ್ಲಿ ಬೆನ್ನುನೋವಿನಿಂದ ನರಳಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಮೂರು ದಿನಗಳ ಬಳಿಕ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಈ ವೇಳೆ ಪತ್ನಿ ಹಾಗೂ ಪುತ್ರನನ್ನು ಕಂಡ ನಟ ದರ್ಶನ್ ಭಾವುಕರಾಗಿದ್ದಾರೆ ಎನ್ನಲಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…