ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಗ್ಯಾಂಗ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್.9ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್ನ ಏಕ ಸದಸ್ಯ ಪೀಠವೂ ಆದೇಶ ಹೊರಡಿಸಿದೆ.
ಈ ಕುರಿತು ಇಂದು(ಡಿ.6) ಹೈಕೋರ್ಟ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠವೂ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಡಿಸೆಂಬರ್ 9 ರಂದು ಮಧ್ಯಾಹ್ನ 2.30 ಗಂಟೆಗೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ಆದೇಶ ಹೊರಡಿಸಿದೆ.
ಈ ವಿಚಾರವಾಗಿ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ನ ಏಕ ಸದಸ್ಯ ಪೀಠವೂ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಅವರು ಸುದೀರ್ಘವಾಗಿ ವಾದವನ್ನು ಆಲಿಸಿದ್ದರು. ಬಳಿಕ ಕರ್ನಾಟಕ ಪೊಲೀಸರ ಪರ ವಕೀಲ ಎಸ್ಪಿಪಿ ಪ್ರಸನ್ನಕುಮಾರ್ ವಾದ ಆಲಿಸುತ್ತಿದ್ದ ವೇಳೆ ಕೋರ್ಟ್ನ ಸಮಯ ಮೀರಿದ ಕಾರಣ ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಗೆ ವಾದ ಮಂಡಿಸಲು ಕಾಲಾವಕಾಶವನ್ನು ನೀಡಿ ಸೋಮವಾರ(ಡಿ.9) ವಿಚಾರಣೆಯನ್ನು ನಡೆಸಲಾಗುವುದು ಎಂದು ಆದೇಶಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದ ದರ್ಶನ್ ಅನಾರೋಗ್ಯದ ಕಾರಣ ಆರು ವಾರಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣವಾಗಿ ರೆಗ್ಯುಲರ್ ಜಾಮೀನಿಗಾಗಿ ಹೈಕೋರ್ಟ್ನಲ್ಲಿ ನಿರಂತರವಾಗಿ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಲೇ ಇದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…