ರಾಜ್ಯ

ದರ್ಶನ್‌ ಮತ್ತು ಗ್ಯಾಂಗ್‌ಗೆ ಇನ್ನೂ 3 ದಿನ ಜೈಲೇ ಫಿಕ್ಸ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿವಿಧ ಜೈಲಿನಲ್ಲಿರುವ ದರ್ಶನ್‌ ಅಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಗಿದಿತ್ತು.

ಈ ಹಿನ್ನೆಲೆಯಲ್ಲಿ ಆರೋಪಿಗಳೆಲ್ಲಾ ವಿಡಿಯೋ ಕಾನ್ಫರೆನ್ಸ್‌ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟೆಂಬರ್.‌12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಎಸಿಪಿ ಚಂದನ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ನಟ ದರ್ಶನ್‌ಗೆ ಜಾಮೀನು ಸಿಗೋದು ಅನುಮಾನ ಎಂದು ಹೇಳಲಾಗುತ್ತಿದೆ.

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಬಳ್ಳಾರಿ ಜೈಲಿನಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಫಿಟ್ನೆಸ್‌ ಮೇಂಟೇನ್‌ ಮಾಡಲು ಒದ್ದಾಟ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಜೈಲಿನಲ್ಲಿ ಅನ್ನ ಬಿಟ್ಟು ಚಪಾತಿ, ಮುದ್ದೆ ಊಟಕ್ಕೆ ಮೊರೆ ಹೋಗಿರುವ ಜೊತೆಗೆ ವಿಟಮಿನ್‌ ಟ್ಯಾಬ್ಲೆಟ್‌ಗಳನ್ನು ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

53 mins ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

56 mins ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

1 hour ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

20 hours ago