ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್ ನ್ಯಾಯಾಲಯ ದರ್ಶನ್ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ದರ್ಶನ್ ಸೇರಿದಂತೆ ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವಿಚಾರಣೆಯಲ್ಲಿ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿತ್ತು.
ಈ ಹಿನ್ನೆಲೆಯಲ್ಲಿ ಇಂದು(ಅ.15) ನಟ ದರ್ಶನ್ ಅವರ ಪರ ವಕೀಲ ಸುನೀಲ್ ಕುಮಾರ್ ಹೈಕೋರ್ಟ್ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಸುಮಾರು 300 ಪುಟಗಳಿಗೂ ಅಧಿಕ ದಸ್ತವೇಜು ಹೊಂದಿರುವ ಈ ಅರ್ಜಿಗೆ ಸದ್ಯ ಎಫ್ಆರ್ ನಂಬರ್ ನೀಡಲಾಗಿದ್ದು, ಪರಿಶೀಲನೆ ನಂತರ ಕ್ರಿಮಿಲ್ ಅರ್ಜಿ ಸಂಖ್ಯೆ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…