ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಿನ್ನೆ(ಅ.14) 57ನೇ ಸಿಸಿಎಚ್‌ ನ್ಯಾಯಾಲಯ ದರ್ಶನ್‌ ಪರ ಜಾಮೀನು ಅರ್ಜಿ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಅವರು ಜಾಮೀನಿಗಾಗಿ ಮಂಗಳವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ದರ್ಶನ್‌ ಸೇರಿದಂತೆ ಇನ್ನುಳಿದ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಈ ವಿಚಾರಣೆಯಲ್ಲಿ 57ನೇ ಸಿಸಿಎಚ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಇಂದು(ಅ.15) ನಟ ದರ್ಶನ್‌ ಅವರ ಪರ ವಕೀಲ ಸುನೀಲ್‌ ಕುಮಾರ್‌ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸುಮಾರು 300 ಪುಟಗಳಿಗೂ ಅಧಿಕ ದಸ್ತವೇಜು ಹೊಂದಿರುವ ಈ ಅರ್ಜಿಗೆ ಸದ್ಯ ಎಫ್‌ಆರ್‌ ನಂಬರ್‌ ನೀಡಲಾಗಿದ್ದು, ಪರಿಶೀಲನೆ ನಂತರ ಕ್ರಿಮಿಲ್‌ ಅರ್ಜಿ ಸಂಖ್ಯೆ ನಮೂದಾಗಬೇಕಿದೆ. ನಂತರವೇ ಅದು ನ್ಯಾಯಪೀಠದ ಮುಂದೆ ಬರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

1 hour ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

2 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

2 hours ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

4 hours ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

4 hours ago