ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ನಟ ದರ್ಶನ್ ಮೈಸೂರಿಗೆ ಹಾಗೂ ಪವಿತ್ರಾ ಗೌಡ ಅವರು ದೆಹಲಿಗೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಇವರಿಬ್ಬರಿಗೂ ಕೆಲ ದಿನಗಳ ಕಾಲ ತೆರಳಲು ಅನುಮತಿ ನೀಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜನವರಿ.10) 57ನೇ ಸಿಸಿಚ್ ನ್ಯಾಯಾಲಯಕ್ಕೆ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನುಳಿದ ಡಿ ಗ್ಯಾಂಗ್ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ದರ್ಶನ್ ಮೈಸೂರಿಗೆ ತೆರಳಲು ಹಾಗೂ ಪವಿತ್ರಾ ಗೌಡ ಹೊರ ರಾಜ್ಯದ ದೇವಾಲಯ ಮತ್ತು ಆರ್.ಆರ್.ನಗರದಲ್ಲಿರುವ ತಮ್ಮ ರೆಡ್ ಕಾರ್ಪೆಟ್ ಶೋ ರೂಂಗೆ ವ್ಯವಹಾರದ ಸಂಬಂಧ ದೆಹಲಿಗೆ ತೆರಳಲು ಅನುಮತಿ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ನಡೆಸಿದ 57ನೇ ಸಿಸಿಎಚ್ನ ನ್ಯಾಯಪೀಠವೂ ಆರೋಪಿ ದರ್ಶನ್ಗೆ ಜನವರಿ.12 ರಿಂದ 17ರವರೆಗೆ ಮೈಸೂರಿನಲ್ಲಿ ವಾಸ್ತವ್ಯದಲ್ಲಿರಲು ಅನುಮತಿ ನೀಡಿದೆ. ಅಲ್ಲದೇ ಪವಿತ್ರಾ ಗೌಡ ಅವರಿಗೆ ಒಂದು ತಿಂಗಳ ಕಾಲ ದೆಹಲಿ ಮತ್ತು ಮುಂಬೈ ಸೇರಿದಂತೆ ಹೊರ ರಾಜ್ಯದ ದೇವಾಲಯಗಳಿಗೆ ತೆರಳಲು ಅನುಮತಿ ನೀಡಲಾಗಿದೆ ಎಂದು ಆದೇಶ ಹೊರಡಿಸಿದೆ.
ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…
ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…
ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ನನ್ನು ದೋಷಿ…
ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…
ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…