ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಸೆಪ್ಟೆಂಬರ್.25ಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ನಾಳೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಅದೇ ದಿನ ಆರೋಪಿಗಳ ವಿರುದ್ಧ ಪೊಲೀಸರು ಹೊರಿಸಿರುವ ರೇಣುಕಾಸ್ವಾಮಿ ಅಪಹರಣ, ಕೊಲೆ, ಸುಲಿಗೆ, ಸಾಕ್ಷ್ಯನಾಶ ಸೇರಿದಂತೆ ಇತರೆ ದೋಷಾರೋಪಗಳು ನಿಗದಿಯಾಗಲಿದೆ.
ಇದನ್ನು ಓದಿ : ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲೇ ಗತಿ
ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ ಅರ್ಜಿ ಕುಡಿತ ಆದೇಶವನ್ನು ಸೆಪ್ಟೆಂಬರ್.25ರಂದು ನ್ಯಾಯಾಲಯ ಪ್ರಕಟಿಸಲಿದೆ.
ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಾದ ಆದೇಶವು ಸೆಪ್ಟೆಂಬರ್.25ರಂದು ಪ್ರಕಟವಾಗಲಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದೀಪಕ್ ಮತ್ತು ಪ್ರದೋಷ್ ಅವರನ್ನು ದೋಷಾರೋಪದಿಂದ ಕೈಬಿಡಲು ಕೋರ್ಟ್ ನಿರಾಕರಿಸಿದ್ದು, ಈ ಕುರಿತಾದ ಅರ್ಜಿಯನ್ನು ವಜಾಗೊಳಿಸಿದೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…