ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್. ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಮೌನವಾಗಿರುವುದು ಏಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮೈಸೂರು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮೌನವಾಗಿಲ್ಲ. ಇದನ್ನೇ ಪ್ರತಿನಿತ್ಯ ಮಾತನಾಡಲು ಸಾಧ್ಯವಿಲ್ಲ. ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್ ಕೊಡಿ ಎಂದು ಸಿಎಂ ಸಿದ್ದರಾಮಯ್ಯರಿಗೆ ನಾನು ಮೊದಲೇ ಸಲಹೆ ನೀಡಿದ್ದೆ ಎಂದರು.
ಇಸ್ಲಾಮಾಬಾದ್: ಭಾರತದಲ್ಲಿ ಈ ಹಿಂದೆ ನಡೆದಿದ್ದ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ…
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…