ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಕ್ರಿಮಿನಲ್‌ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ವಿಶ್ವನಾಥ್‌ ಅವರು, ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಅವನೊಬ್ಬ ಕ್ರಿಮಿನಲ್.‌ ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್‌ ಮೌನವಾಗಿರುವುದು ಏಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಮೈಸೂರು ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನಾನು ಮೌನವಾಗಿಲ್ಲ. ಇದನ್ನೇ ಪ್ರತಿನಿತ್ಯ ಮಾತನಾಡಲು ಸಾಧ್ಯವಿಲ್ಲ. ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯರಿಗೆ ನಾನು ಮೊದಲೇ ಸಲಹೆ ನೀಡಿದ್ದೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

3 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

23 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

24 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

24 hours ago