ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.
ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್ಸ್ಟಾಗ್ರಾಂ ಅನ್ನು ಕೋರಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…