ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್ : ಇನ್ಸ್ಟಾಗ್ರಾಂ , ಆದಾಯ ತೆರಿಗೆ ಇಲಾಖೆಗೆ ತನಿಖಾಧಿಕಾರಿಗಳಿಂದ ಪತ್ರ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್‌ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್‌ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್‌ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.

ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ​ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್​ಸ್ಟಾಗ್ರಾಂ ಅನ್ನು ಕೋರಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

12 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago