ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್ : ಇನ್ಸ್ಟಾಗ್ರಾಂ , ಆದಾಯ ತೆರಿಗೆ ಇಲಾಖೆಗೆ ತನಿಖಾಧಿಕಾರಿಗಳಿಂದ ಪತ್ರ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್‌ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್‌ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್‌ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.

ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ​ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್​ಸ್ಟಾಗ್ರಾಂ ಅನ್ನು ಕೋರಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

31 mins ago

ರೈಲು ಪ್ರಯಾಣ ದರ ಹೆಚ್ಚಳ : ಫೆ.1ರಿಂದ ಪರಿಷ್ಕೃತ ದರ ಜಾರಿ

ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…

35 mins ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

41 mins ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

43 mins ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

1 hour ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

2 hours ago