ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್ : ಇನ್ಸ್ಟಾಗ್ರಾಂ , ಆದಾಯ ತೆರಿಗೆ ಇಲಾಖೆಗೆ ತನಿಖಾಧಿಕಾರಿಗಳಿಂದ ಪತ್ರ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.

ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್‌ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್‌ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್‌ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.

ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್​ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ​ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್​ಸ್ಟಾಗ್ರಾಂ ಅನ್ನು ಕೋರಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago