ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಈ ಪ್ರಕರಣ ಸಂಬಂಧ ತನಿಖೆಯನ್ನ ಚುರುಕುಗೊಳಿಸಿದ್ದು, ಈಗಾಗಲೇ ೧೬೦ಕ್ಕೂ ಸಾಕ್ಷ್ಯಗಳನ್ನ ಕಲೆ ಹಾಕಿದ್ದಾರೆ. ಇನ್ನು ಕೆಲವು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಪಯತ್ನಿಸುತ್ತಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಎಲ್ಲಾ ಮೊಬೈಲ್ ಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ. ಆದರೆ ಈ ಮೊಬೈಲ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಹಲವು ಅಡೆ-ತಡೆಗಳು ಎದುರಾಗುತ್ತಿವೆ.
ಮೃತ ರೇಣುಕಾಸ್ವಾಮಿ ಹಾಗೂ ಆರೋಪಿ ರಾಘುವಿನ ಮೊಬೈಲ್ ಅನ್ನು ನಾಶಪಡಿಸಲಾಗಿದೆ. ಪವಿತ್ರಾ, ದರ್ಶನ್, ಪ್ರದೋಶ್, ವಿನಯ್ ಸೇರಿದಂತೆ ಇನ್ನೂ ಕೆಲವರು ತಮ್ಮ ಮೊಬೈಲ್ಗಳಿಂದ ಡಾಟಾ ಅಳಿಸಿ ಹಾಕಿದ್ದಾರೆ. ಹಾಗಾಗಿ ಪೊಲೀಸರು ಕೆಲವು ಸಂಸ್ಥೆಗಳ ನೆರವು ಪಡೆಯಲು ಮುಂದಾಗಿದ್ದು, ಇನ್ಸ್ಟಾಗ್ರಾಂ ಹಾಗೂ ಆದಾಯ ತೆರಿಗೆಗೆ ಪತ್ರ ಬರೆದಿದ್ದಾರೆ.
ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕಳಿಸಿದ್ದ ಸಂದೇಶವೇ ಇಡೀ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗುತ್ತಿದೆ. ಆದರೆ ರೇಣುಕಾಸ್ವಾಮಿಯ ಮೊಬೈಲ್ ಅನ್ನು ನಾಶ ಮಾಡಿರುವ ಕಾರಣ ಯಾವ ಸಂದೇಶವನ್ನು ಕಳಿಸಿದ್ದ ಎಂಬುದು ತಿಳಿದು ಬಂದಿಲ್ಲ. ಇದೇ ಕಾರಣಕ್ಕೆ ಇದೀಗ ಪೊಲೀಸರು ಇನ್ ಸ್ಟಾಗ್ರಾಂ ಸಂಸ್ಥೆಗೆ ಪತ್ರ ಬರೆಯುತ್ತಿದ್ದು, ಈ ಪ್ರಕರಣ ಸಂಬಂಧ ತನಿಖೆಗೆ ಸಹಾಯವನ್ನು ಕೇಳುತ್ತಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶ ಏನೆಂದು ತಿಳಿಸುವಂತೆ ಪೊಲೀಸರು ಇನ್ಸ್ಟಾಗ್ರಾಂ ಅನ್ನು ಕೋರಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಾಯ ತೆರಿಗೆ ಇಲಾಖೆಗೂ ಸಹ ಪೊಲೀಸರು ಪತ್ರ ಬರೆದಿದ್ದಾರೆ. ಕೊಲೆ ಪ್ರಕರಣದಲ್ಲಿ 70 ಲಕ್ಷಕ್ಕೂ ಹೆಚ್ಚು ನಗದು ಹಣವನ್ನು ಕಾಮಾಕ್ಷಿ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿ ಹತ್ತು ಲಕ್ಷ ರೂ ನಗದು ಹೊಂದಲು ಮಾತ್ರವೇ ಅವಕಾಶವಿದೆ. ಅಲ್ಲದೆ ಯಾವುದೇ ಪ್ರಕರಣದಲ್ಲಿ 10 ಲಕ್ಷಕ್ಕೂ ಹೆಚ್ಚು ನಗದು ದೊರೆತರೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಬೇಕೆಂಬ ನಿಯಮವಿದೆ. ಈಗಾಗಿ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದಿದ್ದು ವಶಪಡಿಸಿಕೊಂಡಿರುವ ಹಣದ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…