ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ, A2 ಆರೋಪಿ ದರ್ಶನ್‌ ಅವರಿಗೂ ಜಾಮೀನು ದೊರೆತಿದೆ.

ಈ ಕುರಿತು ಪವಿತ್ರ ವಕೀಲರಾದ ಶಿಲ್ಪಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಕಕ್ಷಿಧಾರೆ ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್‌, ತಮ್ಮ ಕಕ್ಷಿದಾರರು ಸಿಂಗಲ್‌ ಪೆರೆಂಟ್‌ ಜೊತೆಗೆ ಆಕೆ ಒಬ್ಬ ಮಹಿಳೆ. ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸಿದ್ದರು. ಮುಂದುವರಿದು ಅಪಹರಣ ಅಥವಾ ಕೊಲೆ ಮಾಡುವುದಕ್ಕೆ ಕುಮ್ಮಕ್ಕು ನೀಡಿಲ್ಲ. ಹೀಗಾಗಿ ಪವಿತ್ರ ಜಾಮೀನು ನೀಡಬೇಕು ಎಂದು ತಮ್ಮ ವಾದ ಮಂಡಿಸಿದ್ದರು.

ಹೈಕೋರ್ಟ್‌ ಈ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪುನ್ನು ಕಾಯ್ದಿರಿಸಿತ್ತು. ಇಂದು(ಡಿ.13) ಜಾಮೀನು ಮಂಜೂರು ಆದೇಶ ಹೊರಬಂದಿದೆ. ಆದರೆ ಕೋರ್ಟ್‌ ಅವಳು ಮಹಿಳೆ ಎಂಬ ಕಾರಣಕ್ಕಾಗಿ ಬೇಲ್‌ ನೀಡಿಲ್ಲ. ಬದಲಾಗಿ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಬೇಲ್‌ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪವಿತ್ರಗೌಡಗೆ ಜಾಮೀನು ದೊರೆತರೂ ಇಂದು ಬಿಡುಗಡೆ ಭಾಗ್ಯ ಇಲ್ಲ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಏಳು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ಪವಿತ್ರ ಅವರಿಗೆ ಷರತ್ತು ಬದ್ಧ ಜಾಮೀನು ವಿಧಿಸಿದ್ದು, ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಪವಿತ್ರ ಗೌಡ ಜಾಮೀನಿಗೆ ತಾಯಿಯ ಪ್ರತಿಕ್ರಿಯೆ

ಪವಿತ್ರ ಗೌಡಗೆ ಜಾಮೀನು ಸಿಕ್ಕಿರುವ ಸಂಬಂಧ, ಅವರ ತಾಯಿ ಮಾತನಾಡಿ ಮಗಳಿಗೆ ಜಾಮೀನು ಸಿಕ್ಕಿರುವುದು ತುಂಬಾ ಖುಷಿಯಾಗಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

10 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

10 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

11 hours ago