ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ, A2 ಆರೋಪಿ ದರ್ಶನ್ ಅವರಿಗೂ ಜಾಮೀನು ದೊರೆತಿದೆ.
ಈ ಕುರಿತು ಪವಿತ್ರ ವಕೀಲರಾದ ಶಿಲ್ಪಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಕಕ್ಷಿಧಾರೆ ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಪವಿತ್ರಾ ಗೌಡ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್, ತಮ್ಮ ಕಕ್ಷಿದಾರರು ಸಿಂಗಲ್ ಪೆರೆಂಟ್ ಜೊತೆಗೆ ಆಕೆ ಒಬ್ಬ ಮಹಿಳೆ. ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸಿದ್ದರು. ಮುಂದುವರಿದು ಅಪಹರಣ ಅಥವಾ ಕೊಲೆ ಮಾಡುವುದಕ್ಕೆ ಕುಮ್ಮಕ್ಕು ನೀಡಿಲ್ಲ. ಹೀಗಾಗಿ ಪವಿತ್ರ ಜಾಮೀನು ನೀಡಬೇಕು ಎಂದು ತಮ್ಮ ವಾದ ಮಂಡಿಸಿದ್ದರು.
ಹೈಕೋರ್ಟ್ ಈ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪುನ್ನು ಕಾಯ್ದಿರಿಸಿತ್ತು. ಇಂದು(ಡಿ.13) ಜಾಮೀನು ಮಂಜೂರು ಆದೇಶ ಹೊರಬಂದಿದೆ. ಆದರೆ ಕೋರ್ಟ್ ಅವಳು ಮಹಿಳೆ ಎಂಬ ಕಾರಣಕ್ಕಾಗಿ ಬೇಲ್ ನೀಡಿಲ್ಲ. ಬದಲಾಗಿ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಬೇಲ್ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪವಿತ್ರಗೌಡಗೆ ಜಾಮೀನು ದೊರೆತರೂ ಇಂದು ಬಿಡುಗಡೆ ಭಾಗ್ಯ ಇಲ್ಲ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಏಳು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ಪವಿತ್ರ ಅವರಿಗೆ ಷರತ್ತು ಬದ್ಧ ಜಾಮೀನು ವಿಧಿಸಿದ್ದು, ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪವಿತ್ರ ಗೌಡ ಜಾಮೀನಿಗೆ ತಾಯಿಯ ಪ್ರತಿಕ್ರಿಯೆ
ಪವಿತ್ರ ಗೌಡಗೆ ಜಾಮೀನು ಸಿಕ್ಕಿರುವ ಸಂಬಂಧ, ಅವರ ತಾಯಿ ಮಾತನಾಡಿ ಮಗಳಿಗೆ ಜಾಮೀನು ಸಿಕ್ಕಿರುವುದು ತುಂಬಾ ಖುಷಿಯಾಗಿದೆ ಎಂದಿದ್ದಾರೆ.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…