ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ, A2 ಆರೋಪಿ ದರ್ಶನ್ ಅವರಿಗೂ ಜಾಮೀನು ದೊರೆತಿದೆ.
ಈ ಕುರಿತು ಪವಿತ್ರ ವಕೀಲರಾದ ಶಿಲ್ಪಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಕಕ್ಷಿಧಾರೆ ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಪವಿತ್ರಾ ಗೌಡ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್, ತಮ್ಮ ಕಕ್ಷಿದಾರರು ಸಿಂಗಲ್ ಪೆರೆಂಟ್ ಜೊತೆಗೆ ಆಕೆ ಒಬ್ಬ ಮಹಿಳೆ. ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸಿದ್ದರು. ಮುಂದುವರಿದು ಅಪಹರಣ ಅಥವಾ ಕೊಲೆ ಮಾಡುವುದಕ್ಕೆ ಕುಮ್ಮಕ್ಕು ನೀಡಿಲ್ಲ. ಹೀಗಾಗಿ ಪವಿತ್ರ ಜಾಮೀನು ನೀಡಬೇಕು ಎಂದು ತಮ್ಮ ವಾದ ಮಂಡಿಸಿದ್ದರು.
ಹೈಕೋರ್ಟ್ ಈ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪುನ್ನು ಕಾಯ್ದಿರಿಸಿತ್ತು. ಇಂದು(ಡಿ.13) ಜಾಮೀನು ಮಂಜೂರು ಆದೇಶ ಹೊರಬಂದಿದೆ. ಆದರೆ ಕೋರ್ಟ್ ಅವಳು ಮಹಿಳೆ ಎಂಬ ಕಾರಣಕ್ಕಾಗಿ ಬೇಲ್ ನೀಡಿಲ್ಲ. ಬದಲಾಗಿ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಬೇಲ್ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪವಿತ್ರಗೌಡಗೆ ಜಾಮೀನು ದೊರೆತರೂ ಇಂದು ಬಿಡುಗಡೆ ಭಾಗ್ಯ ಇಲ್ಲ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಏಳು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ಪವಿತ್ರ ಅವರಿಗೆ ಷರತ್ತು ಬದ್ಧ ಜಾಮೀನು ವಿಧಿಸಿದ್ದು, ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪವಿತ್ರ ಗೌಡ ಜಾಮೀನಿಗೆ ತಾಯಿಯ ಪ್ರತಿಕ್ರಿಯೆ
ಪವಿತ್ರ ಗೌಡಗೆ ಜಾಮೀನು ಸಿಕ್ಕಿರುವ ಸಂಬಂಧ, ಅವರ ತಾಯಿ ಮಾತನಾಡಿ ಮಗಳಿಗೆ ಜಾಮೀನು ಸಿಕ್ಕಿರುವುದು ತುಂಬಾ ಖುಷಿಯಾಗಿದೆ ಎಂದಿದ್ದಾರೆ.
ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ…
ಹಾಸನ: ಕಂಬ ಏರಿ ವಿದ್ಯುತ್ ತಂತಿ ದುರಸ್ತಿ ಮಾಡುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್…
ಬೆಂಗಳೂರು: ನಟ ಶಿವರಾಜ್ ಕುಮಾರ್-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಡಿ ಚಾರ್ಜ್ಶೀಟ್ ಪರಿಗಣಿಸಲು ಕೋರ್ಟ್…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ…
ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…