ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳಿಗೆ ಹೈಕೋರ್ಟ್‌ ಇಂದು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಕೊಲೆ ಪ್ರಕರಣದ A1 ಆರೋಪಿ ಪವಿತ್ರ ಗೌಡ, A2 ಆರೋಪಿ ದರ್ಶನ್‌ ಅವರಿಗೂ ಜಾಮೀನು ದೊರೆತಿದೆ.

ಈ ಕುರಿತು ಪವಿತ್ರ ವಕೀಲರಾದ ಶಿಲ್ಪಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಕಕ್ಷಿಧಾರೆ ಪವಿತ್ರಾ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಸೆಬಾಸ್ಟಿಯನ್‌, ತಮ್ಮ ಕಕ್ಷಿದಾರರು ಸಿಂಗಲ್‌ ಪೆರೆಂಟ್‌ ಜೊತೆಗೆ ಆಕೆ ಒಬ್ಬ ಮಹಿಳೆ. ಈ ಪ್ರಕರಣದಲ್ಲಿ ಅವರ ಪಾತ್ರವಿಲ್ಲವೆಂದು ವಾದಿಸಿದ್ದರು. ಮುಂದುವರಿದು ಅಪಹರಣ ಅಥವಾ ಕೊಲೆ ಮಾಡುವುದಕ್ಕೆ ಕುಮ್ಮಕ್ಕು ನೀಡಿಲ್ಲ. ಹೀಗಾಗಿ ಪವಿತ್ರ ಜಾಮೀನು ನೀಡಬೇಕು ಎಂದು ತಮ್ಮ ವಾದ ಮಂಡಿಸಿದ್ದರು.

ಹೈಕೋರ್ಟ್‌ ಈ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ತೀರ್ಪುನ್ನು ಕಾಯ್ದಿರಿಸಿತ್ತು. ಇಂದು(ಡಿ.13) ಜಾಮೀನು ಮಂಜೂರು ಆದೇಶ ಹೊರಬಂದಿದೆ. ಆದರೆ ಕೋರ್ಟ್‌ ಅವಳು ಮಹಿಳೆ ಎಂಬ ಕಾರಣಕ್ಕಾಗಿ ಬೇಲ್‌ ನೀಡಿಲ್ಲ. ಬದಲಾಗಿ ಈ ಪ್ರಕರಣದಲ್ಲಿ ಅವರ ಪಾತ್ರ ಇಲ್ಲ ಎಂಬ ಕಾರಣಕ್ಕೆ ಬೇಲ್‌ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪವಿತ್ರಗೌಡಗೆ ಜಾಮೀನು ದೊರೆತರೂ ಇಂದು ಬಿಡುಗಡೆ ಭಾಗ್ಯ ಇಲ್ಲ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಏಳು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿರುವ ಪವಿತ್ರ ಅವರಿಗೆ ಷರತ್ತು ಬದ್ಧ ಜಾಮೀನು ವಿಧಿಸಿದ್ದು, ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಪವಿತ್ರ ಗೌಡ ಜಾಮೀನಿಗೆ ತಾಯಿಯ ಪ್ರತಿಕ್ರಿಯೆ

ಪವಿತ್ರ ಗೌಡಗೆ ಜಾಮೀನು ಸಿಕ್ಕಿರುವ ಸಂಬಂಧ, ಅವರ ತಾಯಿ ಮಾತನಾಡಿ ಮಗಳಿಗೆ ಜಾಮೀನು ಸಿಕ್ಕಿರುವುದು ತುಂಬಾ ಖುಷಿಯಾಗಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

3 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

8 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

8 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

8 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago