ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ. ನಟ ದರ್ಶನ್ರನ್ನು ಕೇಸ್ನಿಂದ ಹೊರತರಲು, ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ. ಈ ನಡುವೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ ಎಂದು ಸ್ಷಷ್ಟಪಡಿಸಿದ್ದಾರೆ.
ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈ ವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಬರೆದುಕೊಂಡಿದ್ದಾರೆ.
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…