pavithra gowda
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ ಮಾರ್ಪಡಿಸಿದೆ.
ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪವಿತ್ರಾ ಗೌಡ, ನಟ ದರ್ಶನ್ ಹಾಗೂ ಗ್ಯಾಂಗ್, ಮನೆಯೂಟಕ್ಕಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನಟ ದರ್ಶನ್ ಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಿಸಿತ್ತು. ಪವಿತ್ರಾ ಗೌಡಗೆ ಪ್ರತಿದಿನ ಮನೆಯೂಟ ನೀಡಲು ಕೋರ್ಟ್ ಅವಕಾಶ ನೀಡಿತ್ತು. ಆದರೆ ಜೈಲಾಧಿಕಾರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕೈದಿಯೊಬ್ಬಳಿಗೆ ಪ್ರತಿದಿನ ಮನೆಯೂಟಕ್ಕೆ ಅವಕಾಶ ಕೊಟ್ಟರೆ ಜೈಲಿನಲ್ಲಿರುವ ಸಾವಿರಾರು ಕೈದಿಗಳು ತಮಗೂ ಮನೆಯೂಟ ನೀಡಲು ಅವಕಾಶ ಕೇಳುತ್ತಾರೆ ಎಂದು ಆಕ್ಷೇಪಿಸಿ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಈ ಆದೇಶದಲ್ಲಿ ಮಾರ್ಪಾಡು ಮಾಡಿದೆ. ಪವಿತ್ರಾಗೌಡಗೆ ವಾರಕ್ಕೆ ಒಮ್ಮೆ ಮನೆಯೂಟ ನೀಡಲು ಅವಕಾಶ ನೀಡಿದೆ. ಜೊತೆಗೆ ಆರೋಪಿಗಳಾದ ನಾಗರಾಜು, ಲಕ್ಷ್ಮಣ್ಗೂ ಮನೆಯೂಟ ನೀಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…