ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದ ಪವಿತ್ರಾ ಗೌಡ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ಜೈಲು ಸೇರಿದ್ದ ಪವಿತ್ರಾ ಗೌಡ ಹಾಗೂ ಇತರರಿಗೆ ಶುಕ್ರವಾರ ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು.
ಸೋಮವಾರ ಜಾಮೀನಿನ ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಕೂಡ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಕೊಲೆ ಆರೋಪಿಗಳು ತಲಾ ಒಂದು ಲಕ್ಷ ರೂ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತದ ಇಬ್ಬರ ಭದ್ರತೆ ನೀಡಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.
ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್ ತಕ್ಷಣವೇ ಇವರನ್ನು ಯಾಕೆ ಬಂಧಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ.
ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿದೆ.
ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದ ನಟಿ ಪವಿತ್ರಾ ಗೌಡಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಜೈಲಿನಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ.
ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…