ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗ್ಯಾಂಗ್ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಈ ಅರ್ಜಿಯನ್ನು ಜನವರಿ.24 ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು, ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿ ದರ್ಶನ್ ಗ್ಯಾಂಗ್ ಪಡೆದಿರುವ ಜಾಮೀನನ್ನು ಪ್ರಶ್ನಿಸಿ ಜನವರಿ.6 ರಂದು ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿರುವ ಈ ಅರ್ಜಿ ಅನ್ವಯ ಸುಪ್ರೀಂಕೋರ್ಟ್ ಜನವರಿ.24 ರಂದು ಅರ್ಜಿ ವಿಚಾರಣೆಯನ್ನು ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೈಕೋರ್ಟ್ನ ಏಕ ಸದಸ್ಯ ಪೀಠವೂ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ಗೆ ಮಧ್ಯಂತರ ಹಾಗೂ ರೆಗ್ಯುಲರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಎ1 ಆರೋಪಿ ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೋಶ್ ಅವರಿಗೂ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಸರ್ಕಾರದ ಅನುಮತಿ ಪಡೆದು ಈ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…