ರಾಜ್ಯ

ನಟ ದರ್ಶನ್‌ಗೆ ಬಿಗ್‌ ಶಾಕ್:‌ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್‍ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ.

ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣ. ಎಂತಹ ನಾಗರಿಕ ಸಮಾಜವು ತಲೆತಗ್ಗಿಸುವ ಘಟನೆ ಇದಾಗಿದ್ದು, ಆರೋಪಿ ಸ್ಥಾನದಲ್ಲಿರುವ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ನೀಡಿರುವ ಷರತ್ತುಬದ್ಧ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಲಾಗಿದೆ.

ಕಳೆದ ಡಿಸೆಂಬರ್.13ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿಯಾಗಿದ್ದ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್, ಎ3 ಪವನ್, ಎ4 ಜಗದೀಶ್, ಎ5 ನಂದೀಶ್, ಎ7 ಅನುಕುಮಾರ್, ಎ9 ಧನರಾಜ್, ಎ10 ವಿನಯ್, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೂಷ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು.

ಇದೀಗ ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದುಪಡಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಎದೆಯಲ್ಲಿ ಢವ ಢವ ಶುರುವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

8 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

9 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

9 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

11 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

12 hours ago