ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ಗೆ ಹೈಕೋರ್ಟ್ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.11ಕ್ಕೆ ಮುಕ್ತಾಯವಾಗಲಿದೆ.
ಡಿಸೆಂಬರ್.11ಕ್ಕೆ ದರ್ಶನ್ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯುಲರ್ ಬೇಲ್ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಆರೋಪಿ ದರ್ಶನ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆರೋಪಿ ದರ್ಶನ್ಗೆ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳಲಾಗುತ್ತದೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ. ಡಿಸೆಂಬರ್.11ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ. ಹೀಗಾಗಿ ದರ್ಶನ್ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ. ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಮನವಿ ಮಾಡಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್ ಸೇರಿದಂತೆ ಏಳು ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯುಲರ್ ಬೇಲ್ ಸಿಗುವವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…