ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ಗೆ ಸದ್ಯಕ್ಕೆ ರಿಲೀಫ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.‌11ಕ್ಕೆ ಮುಕ್ತಾಯವಾಗಲಿದೆ.

ಡಿಸೆಂಬರ್.11ಕ್ಕೆ ದರ್ಶನ್‌ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್‌ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯುಲರ್‌ ಬೇಲ್‌ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಆರೋಪಿ ದರ್ಶನ್‌ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ಆರೋಪಿ ದರ್ಶನ್‌ಗೆ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳಲಾಗುತ್ತದೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ. ಡಿಸೆಂಬರ್‌.11ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ. ಹೀಗಾಗಿ ದರ್ಶನ್‌ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ. ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್‌ಗೆ ಹಿರಿಯ ವಕೀಲ ಸಿ.ವಿ.ನಾಗೇಶ್‌ ಮನವಿ ಮಾಡಿದರು.

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್‌ ಸೇರಿದಂತೆ ಏಳು ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯುಲರ್‌ ಬೇಲ್‌ ಸಿಗುವವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

52 seconds ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

14 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

35 mins ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

21 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

21 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

22 hours ago