ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ದರ್ಶನ್ಗೆ ಹೈಕೋರ್ಟ್ ನೀಡಿದ್ದ ಆರು ವಾರಗಳ ಮಧ್ಯಂತರ ಜಾಮೀನು ಅವಧಿ ಇದೇ ಡಿಸೆಂಬರ್.11ಕ್ಕೆ ಮುಕ್ತಾಯವಾಗಲಿದೆ.
ಡಿಸೆಂಬರ್.11ಕ್ಕೆ ದರ್ಶನ್ಗೆ ಶಸ್ತ್ರಚಿಕಿತ್ಸೆಗೆ ವೈದ್ಯರು ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಇಂದು ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ರೆಗ್ಯುಲರ್ ಬೇಲ್ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದ್ದು, ಆರೋಪಿ ದರ್ಶನ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಆರೋಪಿ ದರ್ಶನ್ಗೆ ಅನಸ್ತೇಷಿಯಾ ನೀಡಲು ತಯಾರಿ ಮಾಡಿಕೊಳ್ಳಲು ದೇಹ ಸಮತೋಲನಕ್ಕೆ ತೆಗೆದುಕೊಳ್ಳಲಾಗುತ್ತದೆ. ಪಿಸಿಯೋಥೆರಪಿ ಮತ್ತು ವ್ಯಾಯಾಮ ಮಾಡಲಾಗುತ್ತಿದೆ. ಡಿಸೆಂಬರ್.11ರಂದು ಶಸ್ತ್ರಚಿಕಿತ್ಸೆ ಮಾಡಿಸಲು ತಯಾರಿ ಮಾಡಲಾಗಿದೆ. ಹೀಗಾಗಿ ದರ್ಶನ್ ಯಾವುದೇ ಮಧ್ಯಂತರ ಆದೇಶ ಉಲ್ಲಂಘನೆ ಮಾಡಿಲ್ಲ. ದಯಮಾಡಿ ಇದನ್ನು ಕೋರ್ಟ್ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೋರ್ಟ್ಗೆ ಹಿರಿಯ ವಕೀಲ ಸಿ.ವಿ.ನಾಗೇಶ್ ಮನವಿ ಮಾಡಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ದರ್ಶನ್ ಸೇರಿದಂತೆ ಏಳು ಜನರ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಅಲ್ಲದೇ ರೆಗ್ಯುಲರ್ ಬೇಲ್ ಸಿಗುವವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…