ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಮೃತ ದೇಹ ಪತ್ತೆಯಾಗಿತ್ತು. ಪತ್ತೆಯಾದ ಒಂದೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ದರ್ಶನ್ ಆಪ್ತೆ ಪವಿತ್ರಾ ಅವರಿಗೆ ರೇಣುಕಾಸ್ವಾಮಿ ತನ್ನ ಮರ್ಮಾಂಗದ ಫೋಟೋ ಕಳುಹಿಸಿ ಎಂದು ಆತನನ್ನು ದುರ್ಗದಿಂದ ಬೆಂಗಳೂರಿಗೆ ಕರೆತಂದು ಖಾಸಗಿ ಶೆಡ್ನಲ್ಲಿ ಹಲ್ಲೆ ಮಾಡಿ ಕೊಲ್ಲಲಾಗಿದೆ ಎಂದು ಹಳಲಾಗುತ್ತಿತ್ತು. ಇತ್ತ ದರ್ಶನ್ ಅವರು ರೇಣುಕಾ ಮೇಲೆ ಹಲ್ಲೆ ಮಾಡಿ ಕೊಂದಿದ್ದಾರೆ ಎನ್ನಲಾಗಿತ್ತು.
ಇದಕ್ಕೆಲ್ಲಾ ಉತ್ತರ ನೀಡಿರುವ ವೈದ್ಯರು, ರೇಣುಕಾಸ್ವಾಮಿ ಅವರು ಆಘಾತ ಮತ್ತು ರಕ್ತಸ್ರಾವದಿಂದ ಮರಣ ಹೊಂದಿದ್ದಾರೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.
ರೇಣುಕಾಸ್ವಾಮಿ ದೇಹದ ಮೇಲೆ ಸುಮಾರು 15 ಕಡೆಗಳಲ್ಲಿ ಗಾಯದ ಗುರುತುಗಳನ್ನು ಕಾಣಬಹುದಾಗಿದೆ. ಆತನ ತಲೆ, ಹೊಟ್ಟೆ, ಎದೆಯ ಭಾಗಗಳಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ. ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಶೆಡ್ನಲ್ಲಿದ್ದ ಹಲ್ಲೆಗೆ ಬಳಸಲಾಗಿದೆ ಎಂದು ಸಂಶಯಿಸಲಾದ ಮರದ ದಿಮ್ಮಿಗಳು, ಚರ್ಮದ ಬೆಲ್ಟ್, ಹಗ್ಗವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇತ್ತ ಇಂದು ನ್ಯಾಯಾಂಗ ವಿಚಾರಣೆಗೆ ಒಳಪಟ್ಟ ದರ್ಶನ್ ಅಂಡ್ ಟೀಂಗೆ ಆರ್ಥಿಕ ಅಪರಾಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ.
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…