ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಟೋಟಕ ತಿರುವು ಸಿಕ್ಕಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ಬಚವಾಗಲು ಬರೋಬ್ಬರಿ 30 ಲಕ್ಷ ರೂ ಹಣ ನೀಡಿದ್ದರು ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಹತ್ಯೆ ಕೇಸಿನ ವಿಚಾರಣೆ ವೇಳೆ ಪೊಲೀಸ್ ತನಿಖೆಯಲ್ಲಿ ಈ ಸ್ಪೋಟಕ ಮಾಹಿತಿ ಸಿಕ್ಕಿದೆ. ಕೊಲೆಯಾದ ನಂತರ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ ೩೦ ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು. ಈ ದೊಡ್ಡ ಮೊತ್ತದ ಹಣವನ್ನು ಪ್ರದೋಶ್ ಎನ್ನುವವನಿಗೆ ಕೊಟ್ಟು, ಕೆಲವು ಹುಡುಗರನ್ನು ಪೋಲಿಸರಿಗೆ ಸರೆಂಡರ್ ಆಗಲು ಹೇಳಿದ್ದರು. ಆ ಮೂಲಕ ಕೊಲೆ ಕೇಸ್ನಿಂದ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿದಂತೆ ದೊಡ್ಡವರು ಬಚಾವಾಗಲು ಯೋಜನೆ ರೂಪಿಸಿದ್ದರು. ಅದರಂತೆ ಪ್ರದೋಶ್ ಎನ್ನುವ ವ್ಯಕ್ತಿ ಹಣವನ್ನು ಪಡೆದುಕೊಂಡು ಹೋಗಿದ್ದರು.
ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿದ್ದ ಶವವನ್ನು ತೋರಿಸಿ ಬಾಡಿಯನ್ನು ಎಸೆದು ಸರೆಂಡರ್ ಆಗುವಂತೆ ಕಾರ್ತಿಕ್ ಹಾಗೂ ಅವನ ಸಹಚರರಿಗೆ ಸೂಚಿಸಲಾಗಿತ್ತು. ಜೊತೆಗೆ ನೀವು ಅರೆಸ್ಟ್ ಆಗಿ, ಕೋರ್ಟ್ ಖರ್ಜು, ನಿಮಗೆ ಜಾಮೀನು ನೀಡಿ ಹೊರೆಗೆ ಕರೆಸಿಕೊಳ್ಳಲುವ ಖರ್ಚು ಎಲ್ಲವನ್ನು ನೋಡಿಕೊಳ್ಳುತ್ತೇವೆ ಎಂದು ಹೇಳಲಾಗಿತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಈ ಹಣವನ್ನು ದರ್ಶನ್ ಅವರೇ ನೀಡಿದ್ದು, ಕೇಸ್ನಲ್ಲಿ ದರ್ಶನ್ ವಿರುದ್ಧ ಸಿಕ್ಕ ದೊಡ್ಡ ಎವಿಡೆನ್ಸ್ ಆಗಿದೆ. ಕೊಲೆ ಬಳಿಕ ರಾಘವೇಂದ್ರ, ನಿಖಿಲ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಮೊದಲು ಸರೆಂಡರ್ ಆಗಿದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…