ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಟೋಟಕ ತಿರುವು ಸಿಕ್ಕಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ಬಚವಾಗಲು ಬರೋಬ್ಬರಿ 30 ಲಕ್ಷ ರೂ ಹಣ ನೀಡಿದ್ದರು ಎಂದು ತಿಳಿದು ಬಂದಿದೆ.
ರೇಣುಕಾಸ್ವಾಮಿ ಹತ್ಯೆ ಕೇಸಿನ ವಿಚಾರಣೆ ವೇಳೆ ಪೊಲೀಸ್ ತನಿಖೆಯಲ್ಲಿ ಈ ಸ್ಪೋಟಕ ಮಾಹಿತಿ ಸಿಕ್ಕಿದೆ. ಕೊಲೆಯಾದ ನಂತರ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ ೩೦ ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು. ಈ ದೊಡ್ಡ ಮೊತ್ತದ ಹಣವನ್ನು ಪ್ರದೋಶ್ ಎನ್ನುವವನಿಗೆ ಕೊಟ್ಟು, ಕೆಲವು ಹುಡುಗರನ್ನು ಪೋಲಿಸರಿಗೆ ಸರೆಂಡರ್ ಆಗಲು ಹೇಳಿದ್ದರು. ಆ ಮೂಲಕ ಕೊಲೆ ಕೇಸ್ನಿಂದ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿದಂತೆ ದೊಡ್ಡವರು ಬಚಾವಾಗಲು ಯೋಜನೆ ರೂಪಿಸಿದ್ದರು. ಅದರಂತೆ ಪ್ರದೋಶ್ ಎನ್ನುವ ವ್ಯಕ್ತಿ ಹಣವನ್ನು ಪಡೆದುಕೊಂಡು ಹೋಗಿದ್ದರು.
ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿದ್ದ ಶವವನ್ನು ತೋರಿಸಿ ಬಾಡಿಯನ್ನು ಎಸೆದು ಸರೆಂಡರ್ ಆಗುವಂತೆ ಕಾರ್ತಿಕ್ ಹಾಗೂ ಅವನ ಸಹಚರರಿಗೆ ಸೂಚಿಸಲಾಗಿತ್ತು. ಜೊತೆಗೆ ನೀವು ಅರೆಸ್ಟ್ ಆಗಿ, ಕೋರ್ಟ್ ಖರ್ಜು, ನಿಮಗೆ ಜಾಮೀನು ನೀಡಿ ಹೊರೆಗೆ ಕರೆಸಿಕೊಳ್ಳಲುವ ಖರ್ಚು ಎಲ್ಲವನ್ನು ನೋಡಿಕೊಳ್ಳುತ್ತೇವೆ ಎಂದು ಹೇಳಲಾಗಿತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಈ ಹಣವನ್ನು ದರ್ಶನ್ ಅವರೇ ನೀಡಿದ್ದು, ಕೇಸ್ನಲ್ಲಿ ದರ್ಶನ್ ವಿರುದ್ಧ ಸಿಕ್ಕ ದೊಡ್ಡ ಎವಿಡೆನ್ಸ್ ಆಗಿದೆ. ಕೊಲೆ ಬಳಿಕ ರಾಘವೇಂದ್ರ, ನಿಖಿಲ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಮೊದಲು ಸರೆಂಡರ್ ಆಗಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…
ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್ ಶೂಟ್ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ…