ರಾಜ್ಯ

ರೇಣುಕಾಸ್ವಾಮಿ ಕೊಲೆ ಕೇಸ್:‌ ನಟ ದರ್ಶನ್‌ ಬಚಾವಾಗಲು 30 ಲಕ್ಷ ರೂ ಡೀಲ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಟೋಟಕ ತಿರುವು ಸಿಕ್ಕಿದೆ. ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಬಚವಾಗಲು ಬರೋಬ್ಬರಿ 30 ಲಕ್ಷ ರೂ ಹಣ ನೀಡಿದ್ದರು ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಹತ್ಯೆ ಕೇಸಿನ ವಿಚಾರಣೆ ವೇಳೆ ಪೊಲೀಸ್‌ ತನಿಖೆಯಲ್ಲಿ ಈ ಸ್ಪೋಟಕ ಮಾಹಿತಿ ಸಿಕ್ಕಿದೆ. ಕೊಲೆಯಾದ ನಂತರ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ ೩೦ ಲಕ್ಷ ರೂಪಾಯಿ ಹಣವನ್ನು ದರ್ಶನ್‌ ನೀಡಿದ್ದರು. ಈ ದೊಡ್ಡ ಮೊತ್ತದ ಹಣವನ್ನು ಪ್ರದೋಶ್‌ ಎನ್ನುವವನಿಗೆ ಕೊಟ್ಟು, ಕೆಲವು ಹುಡುಗರನ್ನು ಪೋಲಿಸರಿಗೆ ಸರೆಂಡರ್‌ ಆಗಲು ಹೇಳಿದ್ದರು. ಆ ಮೂಲಕ ಕೊಲೆ ಕೇಸ್‌ನಿಂದ ನಟ ದರ್ಶನ್‌ ಹಾಗೂ ನಟಿ ಪವಿತ್ರಾಗೌಡ ಸೇರಿದಂತೆ ದೊಡ್ಡವರು ಬಚಾವಾಗಲು ಯೋಜನೆ ರೂಪಿಸಿದ್ದರು. ಅದರಂತೆ ಪ್ರದೋಶ್‌ ಎನ್ನುವ ವ್ಯಕ್ತಿ ಹಣವನ್ನು ಪಡೆದುಕೊಂಡು ಹೋಗಿದ್ದರು.

ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿದ್ದ ಶವವನ್ನು ತೋರಿಸಿ ಬಾಡಿಯನ್ನು ಎಸೆದು ಸರೆಂಡರ್‌ ಆಗುವಂತೆ ಕಾರ್ತಿಕ್‌ ಹಾಗೂ ಅವನ ಸಹಚರರಿಗೆ ಸೂಚಿಸಲಾಗಿತ್ತು. ಜೊತೆಗೆ ನೀವು ಅರೆಸ್ಟ್‌ ಆಗಿ, ಕೋರ್ಟ್‌ ಖರ್ಜು, ನಿಮಗೆ ಜಾಮೀನು ನೀಡಿ ಹೊರೆಗೆ ಕರೆಸಿಕೊಳ್ಳಲುವ ಖರ್ಚು ಎಲ್ಲವನ್ನು ನೋಡಿಕೊಳ್ಳುತ್ತೇವೆ ಎಂದು ಹೇಳಲಾಗಿತ್ತು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಈ ಹಣವನ್ನು ದರ್ಶನ್‌ ಅವರೇ ನೀಡಿದ್ದು, ಕೇಸ್‌ನಲ್ಲಿ ದರ್ಶನ್‌ ವಿರುದ್ಧ ಸಿಕ್ಕ ದೊಡ್ಡ ಎವಿಡೆನ್ಸ್‌ ಆಗಿದೆ. ಕೊಲೆ ಬಳಿಕ ರಾಘವೇಂದ್ರ, ನಿಖಿಲ್‌, ಕೇಶವಮೂರ್ತಿ ಹಾಗೂ ಕಾರ್ತಿಕ್‌ ಮೊದಲು ಸರೆಂಡರ್‌ ಆಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 mins ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 mins ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

10 mins ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

11 mins ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 mins ago

ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೋಗುತ್ತಿದ್ದ ವೇಳೆ ಕಾರು ಅಪಘಾತ: ಯುವಕ ಸಾವು

ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ…

54 mins ago