ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಿದ ಪೊಲೀಸರು, ಇದೀಗ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ 3991 ಪುಟಗಳಷ್ಟು ಚಾರ್ಜ್‌ಶೀಟ್‌ನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.

ತನಿಖಾಧಿಕಾರಿ ಚಂದನ್‌ ನೇತೃತ್ವದಲ್ಲಿ ಎಸ್‌ಪಿಪಿ ಮೂಲಕ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ಚಾರ್ಜ್‌ಶೀಟ್‌ನಲ್ಲಿ 250 ಸಾಕ್ಷಿಗಳ ಬಗ್ಗೆ ಉಲ್ಲೇಖಿಸಲಾಗಿದೆ. ನಟ ದರ್ಶನ್‌ ಎ2, ಪವಿತ್ರಗೌಡ ಎ1 ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ದಾಖಲಾದ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸುವುದು ನಿಯಮ. ಹಾಗಾಗಿ ಇದೇ ಸೆಪ್ಟೆಂಬರ್‌.9ಕ್ಕೆ ಮೂರು ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ.

ಈ ಹಿನ್ನೆಲೆಯಲ್ಲಿ ಇಂದು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಚಾರ್ಜ್‌ಶೀಟ್‌ ಸಲ್ಲಿಕೆ ನಂತರ ಕೋರ್ಟ್‌ ಪ್ರಕ್ರಿಯೆ ಹೇಗಿರಲಿದೆ ಎಂಬುದೇ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ತೀವ್ರ ಚಿಂತೆಯಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

1 hour ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

2 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

2 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

2 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

2 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

2 hours ago