ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಲು ಒಪ್ಪಿಗೆ ಸೂಚಿಸಿದೆ.
ಈ ವಿಚಾರವಾಗಿ ಇಂದು(ಜನವರಿ.24) ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಹಾಗೂ ಆರ್.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠವೂ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನುಳಿದವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ಈ ಆರೋಪಿಗಳ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ ಎಂದು ಆದೇಶ ಹೊರಡಿಸಿದೆ.
ಇನ್ನೂ ಸುಪ್ರೀಂಕೋರ್ಟ್ನಲ್ಲಿ ಬೆಂಗಳೂರು ಪೊಲೀಸರ ಪರವಾಗಿ ಹಿರಿಯ ವಕೀಲರಾದ ಸಿದ್ದಾರ್ಥ್ ಲೂಥ್ರಾ ಮತ್ತು ಅನಿಲ್ ಸಿ.ನಿಶಾನಿ ಅವರು ವಾದ ಮಂಡಿಸಿದ್ದು, ಹೈಕೋರ್ಟ್ನ ಜಾಮೀನು ಆದೇಶವನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅವರ ಜಾಮೀನನ್ನು ರದ್ದುಗೊಳಿಸಬೇಕು ಎಂದು ವಾದ ಮಂಡಿಸಿದರು.
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…