Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ ಗ್ಯಾಂಗ್‌ ವಿರುದ್ಧ ಏ.2ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಗ್ಯಾಂಗ್‌ ಜಾಮೀನು ಅರ್ಜಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಏಪ್ರಿಲ್‌.2 ರಂದು ವಿಚಾರಣೆ ನಡೆಸಲಾಗುವುದು ಸುಪೀಂಕೋರ್ಟ್‌ ಹೇಳಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಇದೀಗ ಸುಪ್ರೀಂಕೋರ್ಟ್‌ ಏಪ್ರಿಲ್‌.2 ರಂದು ನಡೆಸಲಾಗುವುದು ಎಂದು ತಿಳಿಸಿದೆ.

ಇನ್ನು ಆರೋಪಿ ದರ್ಶನ್‌ ಜಾಮೀನು ಪಡೆದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದು, ಈ ಚಲನಚಿತ್ರದ ಚಿತ್ರೀಕರಣ ಶೂಟಿಂಗ್‌ ಭರದಿಂದ ಸಾಗುತ್ತಿದೆ.

Tags: