ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪ್ರಾಥಮಿಕ ಚಾರ್ಜ್‌ಶೀಟ್‌ ಸಲ್ಲಿಸಲಾಗುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಎಫ್‌ಎಸ್‌ಎಲ್‌ ವರದಿಗಳು ಬರಬೇಕಿದೆ. ಎಲ್ಲಾ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಿದ್ಧವಾಗಿದೆ. ಪಬ್ಲಿಕ್‌ ಪ್ರಾಸಿಕ್ಯೂಟರ್‌ ಅವರಿಗೆ ಚಾರ್ಜ್‌ಶೀಟ್‌ ನೀಡಿ ಸಲಹೆಗಳನ್ನು ಕೂಡ ಪಡೆಯಲಾಗಿದೆ. ಚಾರ್ಜ್‌ಶೀಟ್‌ ನೋಡಿ ಅವರು ಕೆಲವು ಬದಲಾವಣೆ ಮಾಡುವಂತೆ ಸಲಹೆ ಕೊಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು ಕೈ ಸೇರಿವೆ. ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಇನ್ನೂ ಹಲವು ವರದಿಗಳು ನಮ್ಮ ಕೈಸೇರಬೇಕಿದೆ. ಹಾಗಾಗಿ ಇನ್ನೆರಡು ದಿನಗಳಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

14 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

44 mins ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…

51 mins ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

1 hour ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

2 hours ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

3 hours ago