ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳು ಕಳೆದಿದ್ದು, ಪೊಲೀಸ್ ಸಿಬ್ಬಂದಿ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕಷ್ಟು ಜವಾಬ್ದಾರಿ ವಹಿಸಿದ್ದಾರೆ. ತನಿಖೆಯ ವಿಚಾರವಾಗಿ ಎಲ್ಲಿಯೂ ಕೂಡ ಪೊಲೀಸರು ಕಿಂಚಿತ್ತೂ ರಾಜಿಯಾಗಿಲ್ಲ. ತನಿಖೆಯ ಅವಧಿಯಲ್ಲಿ ನೂರಾರು ಸಾಕ್ಷ್ಯಗಳನ್ನು ಕಲೆಹಾಕಿ ಸಾವಿರಾರು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಕಮಿಷನರ್ ದಯಾನಂದ್ ಹಾಗೂ ಡಿಸಿಪಿ ಗಿರೀಶ್ ನೇತೃತ್ವದ ತಂಡವು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ಮಾಡಿರುವುದಕ್ಕೆ ಅಷ್ಟೊಂದು ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವುದು ಪ್ರಮುಖ ಸಾಕ್ಷಿಯಾಗಿದೆ.
ತನಿಖಾ ಹಂತದಲ್ಲಿ ಒಂದು ವೇಳೆ ಯಾಮಾರಿದ್ದರೆ ಪೊಲೀಸರಿಗೆ ಯಾವುದೇ ಪ್ರಮುಖ ಸಾಕ್ಷ್ಯಗಳು ಸಿಗುತ್ತಿರಲಿಲ್ಲ. ದರ್ಶನ್ ಅಂಡ್ ಗ್ಯಾಂಗ್ ವಿಚಾರದಲ್ಲಿ ತೆಗದುಕೊಂಡ ನಿರ್ಧಾರ ಪೊಲೀಸ್ ಹಾಗೂ ಕಾನೂನಿನ ಮೇಲೆ ಜನರಲ್ಲಿ ಅತೀ ಹೆಚ್ಚು ನಂಬಿಕೆ ಹುಟ್ಟಿಸಿದೆ.
ಡಿ ಗ್ಯಾಂಗ್ ಬಂಧನದ ಬಳಿಕ ಪೊಲೀಸರಿಗೆ ಸಾಕಷ್ಟು ಒತ್ತಡವಿದ್ದರೂ ಯಾವುದಕ್ಕೂ ಬಗ್ಗದ ಅವರು ಕರ್ತವ್ಯ ಪ್ರಜ್ಞೆ ಮೆರೆದಿದ್ದು, ಪೊಲೀಸರ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಶಹಬ್ಬಾಸ್ ಎಂದಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…