ರಾಜ್ಯ

ರಾಜ್ಯದಲ್ಲಿ ಪದೇ ಪದೇ ಡ್ರಗ್ಸ್‌ ಜಾಲ ಪತ್ತೆ : ಪೊಲೀಸರನ್ನ ತೀವ್ರ ತರಾಟೆಗೆ ತೆಗೆದುಕೊಂಡ ಹೋಂ ಮಿನಿಸ್ಟರ್‌

ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ತೀರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾನುವಾರ ಬೆಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ಗೃಹ ಸಚಿವರು, ನಗರ ಪೊಲೀಸ್ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು ಮತ್ತು ಸಹಾಯಕ ಆಯುಕ್ತರುಗಳ ಜೊತೆ ಹೊಸಚರಣೆಗೆ ಪೂರ್ವಭಾವಿ ಭದ್ರತೆ ಕುರಿತು ಚರ್ಚೆ ನಡೆಸಿದರು.‌

ಈ ವೇಳೆ ಮಾದಕ ವಸ್ತುಗಳ ವಿಚಾರವಾಗಿ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಈ ಹಿಂದೆ ಮೈಸೂರಿನಲ್ಲಿ ಇದೇ ರೀತಿಯ ಸಿಂಥೇಟಿಕ್ ಡ್ರಗ್ಸ್ ಉತ್ಪಾದನೆಯ ಕಾರ್ಖಾನೆ ಪತ್ತೆಯಾಗಿತ್ತು. ಮುಂದೆ ಇಂತಹ ಘಟನೆಗಳು ಪುನರಾವರ್ತಿಸಬಾರದು ಎಂಬ ಕಟ್ಟಪ್ಪಣೆ ಮಾಡಲಾಗಿತ್ತು. ಹಾಗಿದ್ದರೂ ಬೆಂಗಳೂರಿನಲ್ಲೇ ಮಾದಕ ವಸ್ತುಗಳ ತಯಾರಿಕಾ ಘಟಕಗಳು ಇರುವುದು, ಅದು ಮಹಾರಾಷ್ಟ್ರದ ಪೊಲೀಸರ ಕಾರ್ಯಾಚರಣೆಯಿಂದ ಕಂಡು ಬಂದಿರುವುದು ನಾಚಿಕೆಗೇಟು. ನಮ್ಮ ರಾಜ್ಯದ ಪೊಲೀಸರ ಕಾರ್ಯಕ್ಷಮತೆ ಪ್ರಶ್ನಾರ್ಹವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ: ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಕರ್ನಾಟಕ ಪೊಲೀಸರ ಬಳಿಯು ಗುಪ್ತದಳ ಇದೆ, ಮಾದಕ ದ್ರವ್ಯ ನಿಗ್ರಹ ಪಡೆಯಿದೆ. ಅದಕ್ಕಾಗಿ ಪ್ರತ್ಯೇಕ ಪಡೆಗಳೇ ಕೆಲಸ ಮಾಡುವಾಗ ಡ್ರಗ್ ತಯಾರಿಕೆ ಜಾಲ ಪತ್ತೆಯಾಗದೇ ಇರುವುದು ಯಾವುದೇ ರೀತಿಯಲ್ಲೂ ಸಮರ್ಥನಿಯವಲ್ಲ ಎಂದಿದ್ದಾರೆ.

ಕರ್ನಾಟಕ ರಾಜ್ಯವನ್ನು ಮಾದಕ ವ್ಯಸನ ಮುಕ್ತವಾಗಿಸಬೇಕು ಎಂದು ನಮ್ಮ ಸರ್ಕಾರ ಪಣತೊಟ್ಟಿದೆ. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಬೆಂಬಲ ನೀಡುತ್ತಿದ್ದೇವೆ. ಯಾವುದೇ ಸಂದರ್ಭದಲ್ಲೂ ಪೊಲೀಸರಿಗೆ ಕೈಕಟ್ಟಿ ಹಾಕಿಲ್ಲ. ಹೀಗಿದ್ದರೂ ನೆರೆ ರಾಜ್ಯದ ಪೊಲೀಸರು ಇಲ್ಲಿಗೆ ಬಂದು ಕಾರ್ಯಾಚರಣೆ ನಡೆಸುವುದಾದರೆ ನಾವು ಮೊದಲೇ ಏಕೆ ಮುಂಜಾಗ್ರತೆ ವಹಿಸಲಿಲ್ಲ ಎಂದು ಕಿಡಿಕಾರಿದ್ದಾರೆ.

ಮಾದಕ ವಸ್ತುಗಳನ್ನು ಸಹಿಸಿಕೊಳ್ಳಬಾರದು ಎಂದು ಹಲವು ಬಾರಿ ತಾಕೀತು ಮಾಡಿದ್ದೇವೆ. ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ. ಆಗಿದ್ದರೂ ಏಕೆ ಇಂತಹ ಕೃತ್ಯಗಳು ನಡೆಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಮಾದಕ ವಸ್ತುಗಳ, ಸರಬರಾಜು, ಮಾರಾಟ ಮತ್ತು ಬಳಕೆಯೇ ದೊಡ್ಡ ಸವಾಲಾಗಿತ್ತು. ಅಂತಹದ್ದರಲ್ಲಿ ಮಾದಕ ವಸ್ತುಗಳೇ ಇಲ್ಲಿ ತಯಾರಾಗುತ್ತಿವೆ ಎಂದರೆ ನಾಚಿಕೆಗೇಡು. ಇದಕ್ಕೆ ಸಂಬಂಧಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳನ್ನೆ ಹೊಣೆ ಮಾಡುವುದಾಗಿ ಮೊದಲೇ ಎಚ್ಚರಿಕೆ ನೀಡಿದ್ದಾರೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆಯೂ ಪರಿಶೀಲಿಸುವಂತೆ ಗೃಹ ಸಚಿವರು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…

3 hours ago

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…

3 hours ago

ರಾಗಿ ಖರೀದಿ ಕೇಂದ್ರದಲ್ಲಿ ಹೆಚ್ಚುತ್ತಿರುವ ಅಕ್ರಮ: ಆರೋಪ

ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…

3 hours ago

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

12 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

13 hours ago